ವಿಜಯಪುರ: ಸಿಮೆಂಟ್ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಹಿಂಡಿನ ಮೇಲೆ ಲಾರಿ ಹರಿದು 15ಕ್ಕೂ ಹೆಚ್ಚು ಕುರಿಗಳು ಹಾಗೂ ಕುರಿಗಾಯಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಯುಕೆಪಿ ಸಮೀಪ ನಡೆದಿದೆ.
20 ವರ್ಷದ ಕುರಿಗಾಯಿ ರಾಮು ಗೊಲ್ಲರ್ ಮೃತಪಟ್ಟಿರುವ ದುರ್ದೈವಿ. ಇನ್ನು ಲಾರಿ ಚಾಲಕನ ಅತೀ ವೇಗದಿಂದ ಲಾರಿ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದ್ದು, ಅಲ್ಲದೇ, ಅಪಘಾತದ ಬಳಿಕ ಕೊರಮ್ಮ ದೇವಸ್ಥಾನದ ಹತ್ತಿರ ಲಾರಿ ನಿಲ್ಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲ್ಹಾರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.