ಧಾರವಾಡ: ಕಲಘಟಗಿಯಲ್ಲಿ ಹಸೆಮಣೆ ಏರಬೇಕಿದ್ದ ಯುವಕನ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸರು ಮಾಹಿತಿ ತಿಳಿಸಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ವಿವಾಹಿತ ಮಹಿಳೆ ಜೊತೆ ಯುವಕನ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಆಗಿದೆ. ಇದೇ 7ರಂದು ಹಸೆಮಣೆ ಏರಬೇಕಿದ್ದ ಯುವಕ ನಿಂಗಪ್ಪ ನವಲೂರನ್ನು ಇಬ್ಬರು ಖಾರದ ಪುಡಿ ಎರೆಚಿ ಹತ್ಯೆಗೈದು ಪರಾರಿಯಾಗಿದ್ದರು. ಮುತ್ತಪ್ಪ ಹುಲ್ಲೊಳ್ಳಿ, ವೀರಭದ್ರಪ್ಪ ಜಾಲಿಹಾಳ ಬಂಧಿತ ಆರೋಪಿಗಳು. ಈ ಕುರಿತು ಕಲಘಟಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://karnataka1news.com/wp-content/uploads/2023/06/IMG-20230602-WA0005.jpg)