ವಿಜಯಪುರ: ಆಧ್ಯಾತ್ಮ ಲೋಕದಲ್ಲಿ ಸಿದ್ದೇಶ್ವರ ಶ್ರೀಗಳು ಭಾಸ್ಕರನಿದ್ದಂತೆ ಎಂದು ತುಮಕೂರಿನ ಶ್ರೀಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ವಿಜಯಪುರ ನಗರದ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಿ ಶ್ರೀಗಳ ಚಿತಾ ಭಸ್ಮದ ಸ್ಥಳದಲ್ಲಿ ಪೂಜೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಅವರು, ಆಧ್ಯಾತ್ಮ ಪ್ರವಚನದ ಮೂಲಕ ಶ್ರೀಗಳು ಇಡೀ ಮನುಕುಲಕ್ಕೆ ಮಾದರಿಯಾಗಿದ್ದರು. ಸಾಧ್ಯವಾದರೆ ಚಿತಾಭಸ್ಮ ವಿಸರ್ಜನಾ ಕಾರ್ಯಕ್ರಮದಲ್ಲೂ ಭಾಗವಹಿಸಲು ಪ್ರಯತ್ನಿಸುತ್ತೇನೆ ಎಂದರು.