ವಿಜಯಪುರ: ಗೋಳಗುಮ್ಮಟ ಮೇಲಿಂದ ಹಾರಿ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಗೋಳಗುಮ್ಮಟ್ ಆವರಣದಲ್ಲಿ ಬುಧವಾರ ಸಂಜೆ ನಡೆದಿದೆ.
19 ವರ್ಷದ ಸೌಂದರ್ಯ ಬೆಂಗಳೂರು ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಆದ್ರೇ, ಆತ್ಮಹತ್ಯೆಯ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಸ್ಮಾರಕದ ಗುಮ್ಮಟದ ಮೇಲಿಂದ ಹಾರಿದ ಯುವತಿ ಸಾವನ್ನಪ್ಪಿದ್ದಾಳೆ. ಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಗೋಳಗುಮ್ಮಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.