ವಿಜಯಪುರ: ಬಾವಿಯಲ್ಲಿ ಯುವತಿಯ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ತಳೇವಾಡ ಗ್ರಾಮದಲ್ಲಿ ನಡೆದಿದೆ.
20 ವರ್ಷದ ಸಾವಿತ್ರಿ ಮಲಕಪ್ಪ ಮೂಕನವರ ಶವ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುವುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ. ಶವ ಹೊರತೆಗೆಯಲು ಪೊಲೀಸರು ಹಾಗೂ ಗ್ರಾಮಸ್ಥರು ಹರಸಾಹಸ ಪಟ್ಟರು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೂಡಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.