ವಿಜಯಪುರ: ಬಹಿರ್ದೆಸೆಗೆ ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿಯಾಗಿರುವ ಪರಿಣಾಮ ವ್ಯಕ್ತಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಕೂಡಗಿ ತಾಂಡಾ ರಸ್ತೆಯಲ್ಲಿ ನಡೆದಿದೆ. ಸೋಮು ರಾಠೋಡ ಸಾವನ್ನಪ್ಪಿರುವ ವ್ಯಕ್ತಿ. ಇನ್ನು ಬೈಕ್ ಸವಾರ ಶಿವಾನಂದ ಚಿಮ್ಮಲಗಿ ವಿರುದ್ಧ ಕೇಸ್ ದಾಖಲಾಗಿದೆ. ಬಹಿರ್ದೆಸೆಗೆ ಹೋಗುತ್ತಿದ್ದ ಸೋಮುಗೆ ವೇಗವಾಗಿ ಬಂದು ಬೈಕ್ ಡಿಕ್ಕಿಯಾಗಿದೆ. ಇದರಿಂದ ಮೃತಪಟ್ಟಿದ್ದಾನೆ. ಈ ಕುರಿತು ಕೂಡಗಿ ಎನ್ಟಿಪಿಸಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.