ವಿಜಯಪುರ: ಅಂಗಡಿಯಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ನಿಂದ ಅಂಗಡಿಯಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಗುರುವಾರ ನಡೆದಿದೆ. ಬಸವರಾಜ್ ಬಿರಾದಾರ ಎಂಬುವರ ಅಂಗಡಿಯಲ್ಲಿ ಬೆಂಕಿ ಅವಘಡ ನಡೆದಿದ್ದು, ಬಸವ ಪ್ಲೆಕ್ಸ್ ಹಾಗೂ ಪ್ರಿಂಟರ್ ಅಂಗಡಿಯ ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಊಟಕ್ಕೆ ಹೋದಾಗ ಈ ಅವಘಡ ಆಗಿದೆ ಎಂದು ಮಾಲೀಕ ಬಿರಾದಾರ ಮಾಹಿತಿ ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.