ವಿಜಯಪುರ: ಆಕಸ್ಮಿಕ ಬೆಂಕಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಸಮೀಪದ ಆಂದ್ರಪ್ರದೇಶ ರೈತರ ಲಕ್ಷ್ಮಿ ಕ್ಯಾಂಪ್ನಲ್ಲಿ ನಡೆದಿದೆ.
ಇನ್ನು ಬೆಂಕಿ ಅವಘಡದಲ್ಲಿ ಮೂರು ಶೆಡ್ಗಳು ಸಂಪೂರ್ಣವಾಗಿ ಭಸ್ಮವಾಗಿವೆ. ಒಂದು ಟ್ರ್ಯಾಕ್ಟರ್, ಮೂರು ಬೈಕ್, ಅಪಾರ ಪ್ರಮಾಣದ ಗೊಬ್ಬರ, ಅಕ್ಕಿ ಪಾಕೆಟ್ ಸೇರಿದಂತೆ ದೈನಂದಿನ ವಸ್ತುಗಳು ಬೆಂಕಿಗಾಹುತಿ ಅಗಿವೆ. ಅಂದಾಜು 30ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿ ಆಗಿದೆ. ಘಟನಾ ಸ್ಥಳಕ್ಕೆ ಮುದ್ದೇಬಿಹಾಳ ಪಿಎಸ್ಐ ಸೇರಿದಂತೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.