ವಿಜಯಪುರ: ಫೇಸ್ಬುಕ್ ನಲ್ಲಿ ಅವಹೇಳನಕಾರಿ ಹೇಳಿಕೆ ಪೋಸ್ಟ್ ಮಾಡಿದ್ದ ವ್ಯಕ್ತಿಯ ಹತ್ಯೆಗೈದಿರುವ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ರಘು ಕಣಮೇಶ್ವರ, ತುಳಸಿರಾಮ ಹರಿಜನ, ಗುರುಸಿದ್ದ ಡೋಣಿ ಬಂಧಿತ ಆರೋಪಿಗಳು. ಇನ್ನು ಆರೋಪಿಗಳು ರಮೇಶ ಧಾರಸಂಗನ್ನು ನಗರದಲ್ಲಿ ಬರ್ಬರವಾಗಿ ಹತ್ಯೆಗೈದು ಕುಮಟಗಿ ತಾಂಡಾದಲ್ಲಿ ಮೃತ ದೇಹ ಎಸೆದು ಪರಾರಿಯಾಗಿದ್ದರು. ಹತ್ಯೆಗೆ ಬಳಸಿರುವ ಎರಡು ಬೈಕ್, ಒಂದು ಕಾರ್ ಪೊಲೀಸರು ಜಪ್ತಿಗೈದಿದ್ದಾರೆ.
ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ ನೇತೃತ್ವದಲ್ಲಿ ಆರೋಪಿಗಳು ಬಂಧಿಸಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.