ಬಾಗಲಕೋಟ: ಕೊಲೆಗೈದು ತಲೆಮರೆಸಿಕೊಂಡಿದ್ದ ಆರೋಪಿಯನ್ನು 24 ಗಂಟೆಯಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ 2 ಡು ದಿನಗಳ ಹಿಂದೆ ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ರಾಸ್ನಲ್ಲಿ ಮನಿಕೇರಿ ಮೂಲದ ಚಂದ್ರಪ್ಪ ನಿಜಲಿಂಗಪ್ಪ ಬಣಪ್ಪನವರ (40) ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬೀಳಗಿ ತಾಲೂಕಿನ ಸಿದ್ದಾಪುರ
ರವಿ ಕನಕಪ್ಪ ಪಾತ್ರೊಟ್ ಬಂದಿತ್ ಆರೋಪಿ.
ಘಟನೆ ವಿವರ…
ಕ್ಷುಲಕ ಕಾರಣಕ್ಕೆ ಕುಡಿದ ನಶೆಯಲ್ಲಿ ಇಬ್ಬರು ಮಧ್ಯೆ ಗಲಾಟೆ ಆಗಿದೆ. ಅದಕ್ಕಾಗಿ ಕುಡಿದ ಮತ್ತಿನಲ್ಲಿ ಕೊಲೆ ಮಾಡಿದ್ದೇನೆ ಅಂತ ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ ಎಂದು ಮಾಹಿತಿ ಲಭ್ಯವಾಗಿದೆ. ಬಾಗಲಕೋಟೆ ಎಸ್ಪಿ ಜಯಪ್ರಕಾಶ್ ಹಾಗೂ ಡಿವೈಎಸ್ಪಿ ಎಂ. ಪಾಂಡುರಂಗಯ್ಯ ಮಾರ್ಗದರ್ಶನದ ಮೇರೆಗೆ ಬೀಳಗಿಯ ಸಿಪಿಐ ಎಸ್ ಎಸ್ ಕಮತಗಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬೀಳಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.