ಉತ್ತರ ಕನ್ನಡ: ದೇವರ ಗುಡಿಯ ಒಳಗೆ ಹಾಕಿದ್ದ ಚಿನ್ನದ ಪದಕ ಕಳ್ಳತನಗೈದು ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಲಾಕ್ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಸನವಳ್ಳಿ ಗ್ರಾಮದಲ್ಲಿ ನಡೆದಿದೆ.
ಮಹಾಂತೇಶ ಅರ್ಜುನ ಅರೆಗೊಪ್ಪ(43) ಬಂಧಿತ ಆರೋಪಿ. ಇನ್ನೂ ಸನವಳ್ಳಿ ಗ್ರಾಮದಲ್ಲಿರುವ ದೇವಸ್ಥಾನದ ಬಾಗಿಲು ಒಡೆದು ಒಳಗೆ ನುಗ್ಗಿ 40 ಗ್ರಾಂ ಚಿನ್ನದ ಎರಡು ಪದಕಗಳನ್ನು ಕಳ್ಳತನಗೈದು ಪರಾರಿಯಾಗಿದ್ದ. ಇದನ್ನು ಮುಂಡಗೋಡ ಪಿಎಸ್ಐ ಸಿದ್ದಪ್ಪ ಸಿಮಾನಿ ನೇತೃತ್ವದಲ್ಲಿ ತನಿಖೆಕೈಗೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈ ಕುರಿತು ಮುಂಡಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.