ವಿಜಯಪುರ: ಖಾಕಿ ಬಟ್ಟೆಗೆ ಅಗೌರವ ನೀಡುವ ಕೆಲಸಗಳನ್ನು ಎಡಿಜಿಪಿ ಅಲೋಕಕುಮಾರ ಮಾಡುತ್ತಿದ್ದಾರೆ ಎಂದು ಕರ್ನಾಟಕ ಪೊಲೀಸ ಮಹಾ ಸಂಘದ ರಾಜ್ಯಾಧ್ಯಕ್ಷ ವಿ. ಶಶಿಧರ್ ಆರೋಪಿಸಿದರು. ವಿಜಯಪುರ ನಗರದಲ್ಲಿ ಮಂಗಳವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಹೋರಾಟಗಾರರನ್ನು ಹತ್ತಿಕುವ ಕೆಲಸ ಮಾಡಲಾಗುತ್ತಿದೆ. ಸರ್ಕಾರಗಳು ಪೊಲೀಸ್ ಇಲಾಖೆ ಬಳಸಿಕೊಂಡು ಹೋರಾಟ ಹತ್ತಿಕುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು.
ಪೊಲೀಸ ಮಹಾ ಸಂಘದಲ್ಲಿ ಸಕ್ರಿಯ ಕಾರ್ಯಕರ್ತರಿಗೆ ರೌಡಿಗಳಂತೆ ಅಲೋಕಕುಮಾರ ವರ್ತನೆ ಮಾಡುತ್ತಿದ್ದಾರೆ. ಇದು ಖಂಡನೀಯ ಎಂದು ವಾಗ್ದಾಳಿ ಮಾಡಿದರು. ಇನ್ನು ಪೊಲೀಸ ಇಲಾಖೆಯಲ್ಲಿದ್ದು ಹಾಗೂ ಪೊಲೀಸ್ ಇಲಾಖೆಯಿಂದ ಹೊರ ಬಂದು ಸಾಕಷ್ಟು ಹೋರಾಟ ಮಾಡಿದ್ದೇವೆ.
ಪೊಲೀಸರನ್ನು ಗುಲಾಮರಂತೆ ನೋಡಿಕೊಳ್ಳಲಾಗುತ್ತಿದೆ. ಅಲೋಕಕುಮಾರ ಸಾರ್ವಜನಿಕರ ಕಣ್ಣಿಗೆ ಮಣ್ಣೆರೆವುವ ಕೆಲಸ ಮಾಡಿದ್ದಾರೆ. ಲಾಟರಿ ಹಗರಣದಂತಹ ಬೇರೆ ಬೇರೆ ಹಗರಣದಲ್ಲಿ ಭಾಗಿಯಾದವರಿಂದ ನಮಗೆ ನೈತಿಕ ಪಾಠ ಕಲಿಯುವ ಅವಶ್ಯಕತೆಯಿಲ್ಲ. ಅದಕ್ಕಾಗಿ ನಮ್ಮ ಮೇಲೆ ಸುಳ್ಳು ಆರೋಪ ಸಲ್ಲದು. ಸುಮ್ಮನೆ ಕಿರುಕುಳ ನೀಡುವ ಕೆಲಸ ಮಾಡಿದ್ರೇ ನ್ಯಾಯಾಲಯದ ಕಟಕಟೆ ಏರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ನಮ್ಮ ಸಂಘದ ಹೆಸರಿನಲ್ಲಿ ಯಾರಾದರೂ ವಸೂಲಿ ಮಾಡಿದ್ದರೆ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬಹುದು ಎಂದರು.