ವಿಜಯಪುರ: ನಮ್ಮ ಪಕ್ಷ ಬಿಜೆಪಿ ಬಿ ಟೀಮ್ ಅಲ್ಲ. ನಮ್ಮ ಪಕ್ಷ ಬಿಜೆಪಿ ಅಜೆಂಡಾಗಳನ್ನು ಒಪ್ಪುವುದಿಲ್ಲ. ಅದಕ್ಕಾಗಿ ಎಐಎಂಐಎಂ ಪಕ್ಷಕ್ಕೆ ಬಿ, ಸಿ ಟೀಮ್ ಎನ್ನುವುದು ಸತ್ಯಕ್ಕೆ ದೂರವಾಗಿದೆ ಎಂದು ಎಐಎಂಐಎಂ ರಾಜ್ಯಾಧ್ಯಕ್ಷ ಉಸ್ಮಾನಗಣಿ ಹುಮ್ನಾಬಾದ್ ಹೇಳಿದರು. ವಿಜಯಪುರ ನಗರದಲ್ಲಿ ರವಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ನಗರ ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅದಕ್ಕಾಗಿ ನ್ಯಾಯ, ಸಂವಿಧಾನಕ್ಕಾಗಿ ಹೋರಾಟ ಮಾಡುವವರ ನಮ್ಮ ಪಕ್ಷಕ್ಕೆ ಅರ್ಜಿ ಸಲ್ಲಿಸಬಹುದು. ಅದನ್ನು ಪರಿಗಣಿಸಿ ಅಭ್ಯರ್ಥಿಗಳ ಘೋಷಣೆ ಮಾಡಲಾಗುತ್ತದೆ ಎಂದರು.
ಅಲ್ಲದೇ, ಬೆಳಗಾವಿ ನಾರ್ಥ್ ಲತಿಫ್ಖಾನ್ ಅಮೀರ್ಖಾನ್ ಪಠಾಣ್, ಹುಬ್ಬಳ್ಳಿ ಧಾರವಾಡ ಈಸ್ಟ್ ದುರ್ಗಪ್ಪ ಕಾಶಪ್ಪ ಬಿಜವಾಡ್, ಬಸವನಬಾಗೇಬಾಡಿಗೆ ಅಲ್ಲಾಭಕ್ಷ ಮೆಹಬೂಬ್ಸಾಬ್ ಬಿಜಾಪುರನ್ನು ಮತಕ್ಷೇತ್ರಕ್ಕೆ ಇಳಿಸಲಾಗಿದೆ. ಅದಕ್ಕಾಗಿ ಜನತೆ ಆಶೀರ್ವಾದ ಮಾಡಬೇಕು ಎಂದರು.