ಧಾರವಾಡ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಹುಬ್ಬಳ್ಳಿ-ಧಾರವಾಡ ಬೈಪಾಸ್ (ಹಳೆ ಎನ್ಎಚ್-4) ರಸ್ತೆ ಅಭಿವೃದ್ಧಿ ಪಡಿಸುವುದಕ್ಕಾಗಿ ರಸ್ತೆ ಅಗಲೀಕರಣ ಕಾಮಗಾರಿಗೆ ಸಂಬಂಧಿಸಿದಂತೆ ಮರ ಕಟಾವಣೆ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಮರ ಸಂರಕ್ಷಣಾ ಕಾಯ್ದೆ 1976 ರ ಸೆಕ್ಷನ್ 8 (3) (ಗಿII) ರಲ್ಲಿ ಅಗತ್ಯ ಪಡಿಸಿರುವಂತೆ ಈ ಬಗ್ಗೆ ತಕರಾರು ಸಲ್ಲಿಸಬಯಸುವರು ತಮ್ಮ ತಕರಾರನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಧಾರವಾಡ ಉಪ ವಿಭಾಗ ಹಾಗೂ ಮರ ಅಧಿಕಾರಿಯವರಿಗೆ ಅರಣ್ಯ ಸಂಕೀರ್ಣ ಕೆ.ಸಿ.ಪಾರ್ಕ್ ಎದುರು ಧಾರವಾಡ ಕಛೇರಿಯಲ್ಲಿ ಮಾ.06 ರಂದು ಬೆಳಿಗ್ಗೆ 11 ಗಂಟಗೆ ಸಾರ್ವಜನಿಕ ವಿಚಾರಣೆ ಸಲುವಾಗಿ ದಿನಾಂಕವನ್ನು ನಿಗದಿಪಡಿಸಲಾಗಿದೆ. ಆ ದಿನಾಂಕದಂದು ಸಾರ್ವಜನಿಕರು ತಂಟೆ ತಕರಾರು ಇದ್ದಲ್ಲಿ ಖುದ್ದು ಹಾಜರಾಗಿ ಈ ಕಚೇರಿಗೆ ಸಲ್ಲಿಸಬೇಕೆಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.