ಬಾಗಲಕೋಟ: ಎತ್ತಿನ ಚಕ್ಕಡಿಗೆ ಬುಲೆರೋ ವಾಹನ ಡಿಕ್ಕಿಯಾಗಿರುವ ಪರಿಣಾಮ ಎತ್ತು ಸ್ಥಳದಲ್ಲಿ ಅಸುನೀಗಿರುವ ಘಟನೆ ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಕೊರ್ತಿ ಕ್ರಾಸ್ ಬಳಿ ನಡೆದಿದೆ. ಕಬ್ಬು ಕಟಾವ್ಗೆ ಹೊರಟಿದ್ದ ಎತ್ತಿನ ಚಕ್ಕಡಿಗೆ ಹಿಂದಿನಿಂದ ಬಂದ ಬುಲೆರೋ ವಾಹನ ಡಿಕ್ಕಿ ಹೊಡೆದಿದೆ. ಇದರಿಂದ ಎತ್ತು ಸ್ಥಳದಲ್ಲಿ ಸಾವನ್ನಪ್ಪಿದೆ. ಚಕ್ಕಡಿಯಲ್ಲಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಬಾಡಗಂಡ್ಡಿ ಸಕ್ಕರೆ ಕಾರ್ಖಾನೆವತಿಯಿಂದ ಕಬ್ಬು ಕಟಾವ್ಗೆ ಹೊರಟಿದ್ದ ಚಕ್ಕಡಿಯಲ್ಲಿ ಮಹಾರಾಷ್ಟ್ರ ರಾಜ್ಯದ ಬಿಡಿ ಗ್ರಾಮದ ಇಬ್ಬರಿಗೆ ಗಾಯ ಆಗಿದೆ. ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೀಳಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.