ವಿಜಯಪುರ: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಓರ್ವ ಅಸುನೀಗಿರುವ ಘಟನೆ ವಿಜಯಪುರ ನಗರದ ಸಾಯಿ ಪಾರ್ಕ್ ಬಳಿಯ ಬ್ರಿಡ್ಜ್ ಮೇಲೆ ನಡೆದಿದೆ.
17 ವರ್ಷದ ಸ್ವರೂಪ ಸಾರವಾಡ ಮೃತಪಟ್ಟಿರುವ ದುರ್ದೈವಿ. ಇನ್ನು ಬ್ರಿಡ್ಜ್ ಮೇಲೆ ಹೋಗುವಾಗ ಅಪರಿಚಿತ ವಾಹನ ಡಿಕ್ಕಿ ಬಳಿಕ ಅಪರಿಚಿತ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಅಲ್ಲದೇ, ಘಟನೆಯಲ್ಲಿ ಮತ್ತೊರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಸಂಚಾರಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.