ವಿಜಯಪುರ: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾದ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ರಾಜ್ಯ ಘಟಕ ಅರ್ಜಿ ಆಹ್ವಾನಿಸಿದೆ. ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸದಸ್ಯರ ಮಕ್ಕಳು ತಮ್ಮ ಅಂಕಪಟ್ಟಿ, ಆಧಾರ್ ಕಾರ್ಡ್ ಸಹಿತ ಸ್ವವಿವರಗಳ ಜೊತೆಗೆ ಅರ್ಜಿ ಸಲ್ಲಿಸಬೇಕು.
![](https://karnataka1news.com/wp-content/uploads/2023/05/FB_IMG_1684654624477-1010x1024.jpg)
ಅರ್ಜಿ ಜೊತೆಗೆ ಸಂಘದ ಸದಸ್ಯತ್ವ ಗುರುತಿನ ಕಾರ್ಡ್, ಆಧಾರ್ ಹಾಗೂ ಅಂಕಪಟ್ಟಿ ಝರಾಕ್ಸ್ ಲಗತ್ತಿಸುವುದು ಕಡ್ಡಾಯ. ಸರಿಯಾದ ದಾಖಲಾತಿಗಳಿಲ್ಲದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಭರ್ತಿ ಮಾಡಿದ ಅರ್ಜಿಗಳನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಬಳಿ ಸಲ್ಲಿಸಬೇಕು. *ಅರ್ಜಿ ಸಲ್ಲಿಕೆಗೆ ಮೇ 31 ಕೊನೆ ದಿನಾಂಕ ಆಗಿದೆ. ಅಲ್ಲಿಯವರೆಗೆ ಬಂದ ಅರ್ಜಿಗಳನ್ನು ಮಾತ್ರ ಬೆಂಗಳೂರಿಗೆ ಕಳುಹಿಸಿಕೊಡಲಾಗುವುದು. ನಂತರ ಬಂದವುಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.