ವಿಜಯಪುರ: ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ ಹತ್ತು ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ದಿನಾಂಕ:02-05-2023 ರಿಂದ 29-02-2024ರವರೆಗೆ ಬೆಳಗಾವಿ ಜಿಲ್ಲೆಯ ಹಿಡಕಲ್ ಡ್ಯಾಂ ತೊಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದೆ. ಜಿಲ್ಲೆಯ ರೈತ ಮಕ್ಕಳು ದಿನಾಂಕ:12-04-2023ರ ಸಂಜೆ 5 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ ಜಿಲ್ಲೆಯ ತೋಟಗಾರಿಕೆ ಉಪ ನಿರ್ದೇಶಕರು, ಜಿಲ್ಲಾ ಪಂಚಾಯತ್ ವಿಜಯಪುರ, ಹಿರಿಯ ಸಹಾಯಕ ತೊಟಗಾರಿಕೆ ನಿರ್ದೇಶಕರು, ರಾಜ್ಯ ವಲಯ, ವಿಜಯಪುರ ಇವರನ್ನು ಹಾಗೂ ಮೊಬೈಲ್ ಸಂಖ್ಯೆ 8310703511 ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ವಿಜಯಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.