ವಿಜಯಪುರ: ಹಣಕಾಸಿನ ವಿಚಾರಕ್ಕೆ ಉಂಟಾದ ಜಗಳ ಬೀಡಿಸಲು ಎಸ್ಪಿ ಲಘು ಲಾಠಿ ಪ್ರಹಾರ ಮಾಡಿರುವ ಘಟನೆ ವಿಜಯಪುರ ನಗರದ ಬಾಗಲಕೋಟ ಕ್ರಾಸ್ ಬಳಿ ನಡೆದಿದೆ.
ಚಿಕನ್ ಅಂಗಡಿಕಾರರ ಜೊತೆ ಉಂಟಾದ ಜಗಳ ಬೀದಿಗೆ ಬಂದಿದ್ದರಿಂದ ರಸ್ತೆ ಸಂಚಾರಕ್ಕೆ ತೊಂದರೆಯೂ ಆಗಿತ್ತು. ಕೂಡಲೇ ಕಾರ್ ನಿಂದ ಇಳಿದ ಎಸ್ ಪಿ ಎಚ್.ಡಿ. ಆನಂದಕುಮಾರ ಎರಡೂ ಗುಂಪುಗಳಲ್ಲಿದ್ದವರಿಗೆ ಥಳಿಸಿದ್ದಾರೆ.
ಬಳಿಕ ಸಂಬಂಧಿಸಿದ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಹತೋಟಿಗೆ ತಂದರು. ಮಾತ್ರವಲ್ಲ, ಗಲಾಟೆ ನಡೆಸಿದವರನ್ನು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿದರು. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.