ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆ ರೌಡಿಶೀಟರ್ನ್ನು ಗುಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಿರುವ ಘಟನೆ ವಿಜಯಮರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ನಡೆದಿದೆ. ಹುಚ್ಚಪ್ಪ ಮಲ್ಲಕಾರ್ಜುನ ಕಾಲೇಬಾಗ ಬಂಧಿತ ರೌಡಿಶೀಟರ್. ಇಂಡಿ ಪೊಲೀಸ್ ಠಾಣೆ, ಇತರೆ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದು, ಸದರಿ ಪ್ರಕರಣಗಳಲ್ಲಿ ಜೈಲಿಗೆ ಹೋಗಿ ಬಂದಿದ್ದರು. ಅದಕ್ಕಾಗಿ ಚುನಾವಣೆಯಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗವನ್ನುಂಟು ಮಾಡುವ ಹಿನ್ನಲೆ ಗುಂಡಾ ಕಾಯ್ದೆ ಅಡಿಯಲ್ಲಿ ವಿಜಯಪುರ ದರ್ಗಾ ಜೈಲಿಗೆ ಕಳುಹಿಸಲಾಗಿದೆ.