ವಿಜಯಪುರ: ಗೂಡ್ಸ್ ವಾಹನದಲ್ಲಿ ಜಾನುವಾರುಗಳನ್ನು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಓರ್ವನ ಮೇಲೆ 15 ರಿಂದ 20 ಜನರು ಬಡಿಗೆಯಿಂದ ಹಲ್ಲೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಸಾರವಾಡ ಬ್ರಿಡ್ಜ್ ಬಳಿ ನಡೆದಿದೆ. ಬಂದೇನವಾಜ್ ಜಾತಗಾರ ಹಲ್ಲೆಗೊಳಗಾದವರು. ಇನ್ನು ಭಜರಂಗದಳದವರು ಎಂದು ವೀರೇಶ ಹಿರೇಮಠ, ರಾಜು ಬಿರಾದಾರ ಸೇರಿದಂತೆ 15-20 ಜನರು ಹಲ್ಲೆಗೈದು ಪರಾರಿಯಾಗಿದ್ದಾರೆ. ಗಾಯಾಳು ಜಾತಗಾರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಆಗಿದ್ದಾರೆ. ಗೂಡ್ಸ್ ವಾಹನದಲ್ಲಿ ಎರಡು ಹೋರಿ, ಒಂದು ಆಕಳು, ಒಂದು ಎಮ್ಮೆಯ ಕರ ತೆಗೆದುಕೊಂಡು ಹೋಗುವಾಗ ಈ ಹಲ್ಲೆ ನಡೆದಿದೆ ಎಂದು ದೂರ ನೀಡಿದ್ದಾರೆ. ಬಬಲೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.