ವಿಜಯಪುರ: ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ. ಕಾರು ಹಾಗೂ ಟ್ರಕ್ ಮಧ್ಯೆ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಪುರುಷರು, ಓರ್ವ ಮಹಿಳೆ, ಓರ್ವ ಬಾಲಕ ಸಾವನ್ನಪ್ಪಿದ್ದಾರೆ. ಆದ್ರೇ, ಮೃತರ ಹೆಸರು ಇನ್ನೂ ತಿಳಿದುಬಂದಿಲ್ಲ. ವಿಜಯಪುರದಿಂದ ಜಮಖಂಡಿಗೆ ಹೊರಟಿದ್ದ ಕಾರು, ಜಮಖಂಡಿ ಕಡೆಯಿಂದ ವಿಜಯಪುರಕ್ಕೆ ಬರುತ್ತಿದ್ದ ಟ್ರಕ್ ಮಧ್ಯೆ ಅಪಘಾತ ಆಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.