ವಿಜಯಪುರ: ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ಕಾಂಗ್ರೆಸ್ ಶಾಸಕ ಶಿವಾನಂದ ಪಾಟೀಲ್ ವಿರುದ್ಧ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ಟಿಕೆಟ್ಗಾಗಿ ಲಾಬಿ ಆರಂಭಸಿದ್ದಾರೆ. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಬರುವ ವಿಧಾನಸಭಾ ಚುನಾವಣೆಯಲ್ಲಿ ಬಸವನಬಾಗೇಬಾಡಿ ಮತಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿ ಆಗಿದ್ದೇನೆ. ಹೈ ಕಮಾಂಡ್ಗೆ ಟಿಕೆಟ್ ಕೇಳುತ್ತೇನೆ. ಟಿಕೆಟ್ ನೀಡಿದ್ರೇ ಬಸವನಬಾಗೇಬಾಡಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದರು.