ವಿಜಯಪುರ: ರಸ್ತೆ ಬದಿಯಲ್ಲಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿಯಾಗಿರುವ ಪರಿಣಾಮ ವ್ಯಕ್ತಿ ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ತಾಲ್ಲೂಕಿನ ತಿಡಗುಂದಿ ಬಸ್ ನಿಲ್ದಾಣದ ಬಳಿ ನಡೆದಿದೆ. ಜಗದೀಶ್ ಬುದ್ನಿ 34 ಮೃತಪಟ್ಟಿರುವ ದುರ್ದೈವಿ. ಮೂಲತಃ ರಾಜಸ್ಥಾನ ಹಾಗೂ ಹಾಲಿ ವಸ್ತಿ ಬಬಲೇಶ್ವರ ನಿವಾಸಿ ಭೀಕಾರಾಮ ಚೌಧರಿ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.