ವಿಜಯಪುರ: ಮಗನ ಕಿರುಕುಳ, ಮಗನ ಸಾಲಭಾದೆ ತಾಳಲಾರದೆ ಮಗನ ಕೊಲೆಗೆ ಸುಪಾರಿ ನೀಡಿದ ತಾಯಿ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರದಲ್ಲಿ ಎಸ್ಪಿ ಋಷಿಕೇಶ್ ಸೋನವಾಣೆ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಯಿ ಶ್ರೀದೇವಿ ಯಕ್ಕುಂಡಿ, ಪ್ರಕಾಶ ಗೊಲ್ಲರ್, ರಾಹುಲ್ ಗೊಲ್ಲರ್, ರಾಘವೇಂದ್ರ ಸಾಠೆ, ಸಂತೋಷ ಬಿದರಿ ಬಂಧಿತ ಆರೋಪಿಗಳು. ಇನ್ನು ಮಗ ಮಲ್ಲಿಕಾರ್ಜುನ ಯಕ್ಕುಂಡಿ ಮದ್ಯ ಸೇವಿಸಿ ಗಲಾಟೆ ಮಾಡುತ್ತಿದ್ದನು. ಅಲ್ಲದೇ, ಸಾಲ ಮಾಡುತ್ತಿದ್ದನು. ಅದಕ್ಕಾಗಿ ತಾಯಿ ಶ್ರೀದೇವಿ ತನ್ನ ಸಹಚರರಿಗೆ ಸುಪಾರಿ ನೀಡಿ ಕೊಲೆ ಮಾಡಿಸಿದ್ದಾಳೆ ಎಂದು ಮಾಹಿತಿ ನೀಡಿದರು. ಅದಕ್ಕಾಗಿ ಆರೋಪಿಗಳನ್ನು ಬಂಧಿಸಿ ಮುಂದಿನ ಕಾನೂನು ಕ್ರಮಕೈಗೊಳ್ಳಲಾಗಿದೆ. ಅಲ್ಲದೇ, ಮಗ ಮಲ್ಲಿಕಾರ್ಜುನ ನಾಪತ್ತೆಯಾಗಿರುವ ಬಗ್ಗೆ ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಾಪತ್ತೆ ಕೇಸ್ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ನಾಪತ್ತೆಯಿಂದ ಕೊಲೆಯಲ್ಲಿ ಪ್ರಕರಣ ಅಂತ್ಯ ಆಗಿದೆ. ಈ ಕುರಿತು ಎಪಿಎಂಸಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://karnataka1news.com/wp-content/uploads/2023/09/Knife.jpg)