ಗದಗ: ರಾಕಿಂಗ್ ಸ್ಟಾರ್ ಹಾಗೂ ನಟ ಯಶ್ ಹುಟ್ಟುಹಬ್ಬಕ್ಕೆ ಬ್ಯಾನರ್ ಕಟ್ಟುವಾಗ ಮೂವರು ಅಭಿಮಾನಿಗಳು ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಹನಮಂತ ಹರಿಜನ (21), ಮುರಳಿ ನಡವಿನಮನಿ (20) ನವೀನ್ ಗಾಜಿ (19) ಮೃತ ಅಭಿಮಾನಿಗಳು. ಮೃತ ಯುವಕರು ಸೂರಣಗಿ ಗ್ರಾಮದ ನಿವಾಸಿಗಳು. ಯಶ್ ಬರ್ತ್ ಡೇಗಾಗಿ ಅಭಿಮಾನಿಗಳು ಗ್ರಾಮದಲ್ಲಿ ಬ್ಯಾನರ್ ಕಟ್ಟಲು ಮುಂದಾಗಿದ್ದರು. ಬ್ಯಾನರ್ ಮೇಲೆ ಎತ್ತುತ್ತಿದ್ದಾಗ ಯುವಕರಿಗೆ ಏಕಾಏಕಿ ವಿದ್ಯುತ್ ಸ್ಪರ್ಷಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಈ ವೇಳೆ ಅಲ್ಲೇ ನಿಂತುಕೊಂಡಿದ್ದ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂದಿನ ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ.
![](https://karnataka1news.com/wp-content/uploads/2023/12/IMG-20231227-WA0126-1-1024x1024.jpg)