ಬಾಗಲಕೋಟ: ಬೈಕ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ ಬರುವ ಯಡಹಳ್ಳಿ ಕ್ರಾಸ್ ಹತ್ತಿರ ನಡೆದಿದೆ.
ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಅವರ ಸಹೋದರ ಮಲ್ಲಿಕಾರ್ಜುನ ಬೆಳ್ಳುಬ್ಬಿಯ ಪುತ್ರ ಸಚಿನ ಬೆಳ್ಳುಬ್ಬಿ ಹಾಗೂ ಕೂಬಕಡ್ಡಿ ಗ್ರಾಮದ ಪರಸಪ್ಪ ಉಗ್ರಾಣ ಮೃತಪಟ್ಟಿರುವ ದುರ್ದೈವಿ.
ಇನ್ನು ಇಬ್ಬರು ಬೆಳಗಾವಿ ಜಿಲ್ಲೆ ಸವದತ್ತಿ ಎಲ್ಲಮ್ಮದೇವಿ ದೇವಸ್ಥಾನಕ್ಕೆ ಹೋಗಿ ಮರಳಿ ಕೊಲ್ಹಾರಕ್ಕೆ ಬರುವ ಸಂದರ್ಭದಲ್ಲಿ ಯಡಹಳ್ಳಿ ಹತ್ತಿರ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.