ವಿಜಯಪುರ: ವಿಧಾನ ಪರಿಷತ್ ನ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿದ್ದು ವಾಯುವ್ಯ ಶಿಕ್ಷಕರ ಹಾಗೂ ಪದವೀಧರ ಮತಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿಗಳಾದ ಅರುಣ ಶಹಾಪುರ ಹಾಗೂ ಹಣಮಂತ ನಿರಾಣಿ ಅವರ ಪರವಾಗಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಇವರು ವಿಜಯಪುರ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಛತ್ರಪತಿ ಶಿವಾಜಿ ಮಹಾರಾಜರ ಎಜ್ಯುಕೇಷನ್ ಸೊಸೈಟಿಯ ಶ್ರೀ ರವೀಂದ್ರನಾಥ ಠಾಗೋರ್ ಶಾಲೆಯಲ್ಲಿ ಕರಪತ್ರ ಕೊಟ್ಟು ಪ್ರಚಾರ ನಡೆಸಿದರು.
ಸಂಸ್ಥೆಯ ಅಧ್ಯಕ್ಷ ಶಿವಾಜಿ ಗಾಯಕವಾಡ ಇವರ ಸಮ್ಮುಖದಲ್ಲಿ ಸಭೆ ನಡೆಸಿದ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ ಬಿಜೆಪಿ ಸರಕಾರವು ಶಿಕ್ಷಕರ ಪರವಾಗಿರುವದ್ರಿಂದ ಬಿಜೆಪಿ ಅಭ್ಯರ್ಥಿಗಳಿಗೆ ಮತ ನೀಡುವಂತೆ ವಿನಂತಿಸಿದರು. ಇದೇ ವೇಳೆ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಚೇರಮನ್ ವಸಂತ ಗಾಯಕವಾಡ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ, ಯುವ ಮೊರ್ಚಾ ಸತೀಶ ಪಾಟೀಲ, ಸಿದ್ದು ಮಲ್ಲಿಕಾರ್ಜುನಮಠ, ಮಾಧ್ಯಮ ವಕ್ತಾರ ವಿಜಯ ಜೋಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.