ವಿಜಯಪುರ: ನಡೆದಾಡುವ ದೇವರು ಲಿಂ.ಸಿದ್ದೇಶ್ವರ ಶ್ರೀಗಳಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಶ್ರದ್ಧಾಂಜಲಿ ಸಲ್ಲಿಸಿದರು. ಜ್ಞಾನ ಯೋಗಾಶ್ರಮಕ್ಕೆ ಭೇಡಿ ನೀಡಿ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಗದ್ದುಗೆಗೆ ನಡ್ಡಾ ಭಕ್ತಿ ಪೂರ್ವಕವಾಗಿ ನಮಿಸಿದರು.
ಸಿಂದಗಿಯಲ್ಲಿ ಆಯೋಜನೆಗೊಂಡಿರುವ ವಿಜಯ ಸಂಕಲ್ಪ ಯಾತ್ರೆ ಹಿನ್ನೆಲೆ ವಿಜಯಪುರ ಕ್ಕೆ ಆಗಮಿಸಿರುವ ನಡ್ಡಾ ನಾಗಠಾಣ ವಿಧಾನ ಸಭೆ ಕ್ಷೇತ್ರ ವ್ಯಾಪ್ತಿ ಯ ಜ್ಞಾನ ಯೋಗಾಶ್ರಮಕ್ಕೆ ಭೇಟಿ ನೀಡಿದರು. ಪೂಜ್ಯ ಲಿಂ.ಸಿದ್ದೇಶ್ವರ ಶ್ರೀಗಳ ಭಾವಚಿತ್ರಕ್ಕೆ ಭಕ್ತಿ ಪೂರ್ವಕ ಪ್ರಣಾಮ ಸಲ್ಲಿಸಿದರು. ಬಳಿಕ ಅಲ್ಲಿನ ಪೂಜ್ಯರುಗಳೊಂದಿಗೆ ಮಾತನಾಡಿದರು. ನಂತರ ನಾಗಠಾಣ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಹಿನ್ನೆಲೆ ಗೋಡೆ ಬರಹ, ಕರಪತ್ರ ಹಂಚಿಕೆ ಹಾಗೂ ಮಿಸ್ ಕಾಲ್ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ಬಿಜೆಪಿ ವಿವಿಧ ಮುಖಂಡರು ಸಾಥ್ ನೀಡಿದರು.