ಧಾರವಾಡ: ಧಾರವಾಡ ನಗರದ ಪ್ರಧಾನ ಅಂಚೆ ಕಚೇರಿ ಬಳಿ ವ್ಯಕ್ತಿಯ ಶವ ಪತ್ತೆಯಾಗಿದೆ. ದಾವಣಗೆರೆ ಮೂಲದ ದುರ್ಗೆಶ ಹನಮಂತಪ್ಪ ಮಂಗೋಡಿ (40) ಎಂಬುವನ ಶವ ಎಂದು ಗೊತ್ತಾಗಿದೆ. ನಗರದಲ್ಲಿ ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದ. ಈತನ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ಶವದ ಮೇಲೆ ಕೆಲವು ರಕ್ತದ ಕಲೆಗಳು ಕಂಡು ಬಂದಿವೆ. ಸ್ಥಳಕ್ಕೆ ವಿದ್ಯಾಗಿರಿ ಠಾಣೆಯ ಸಿಪಿಐ ಸಂಗಮೇಶ ದಿಡಿಗಿನಾಳ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.