ವಿಜಯಪುರ: ಗಣೇಶ ಉತ್ಸವ ಹಿನ್ನಲೆ ನಾಳೆ ಗಣೇಶ ಪ್ರತಿಷ್ಠಾನ ಮಾಡಲಾಗುತ್ತದೆ. ಅದಕ್ಕಾಗಿ ನಾಳೆ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇನ್ನು ಗಣೇಶ ಉತ್ಸವದಲ್ಲಿ ಯಾವುದೇ ಅಹಿತಕರ ಘಟನೆಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಆದೇಶ ಮಾಡಲಾಗಿದೆ. ಅಲ್ಲದೇ, ಗಣೇಶ ವಿಸರ್ಜನೆ ದಿನವಾದ ಸೆಪ್ಟೆಂಬರ್ 4, 6,8,10 ಕೂಡ ಜಿಲ್ಲಾದ್ಯಂತ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.