ಕಲಬುರಗಿ: ಬಸ್ ನಿಲ್ದಾಣದಲ್ಲಿದ್ದ ನಿಲ್ಲಿಸಿದ್ದ ಬಸ್ನ್ನು ಕಳ್ಳರು ತೆಗೆದುಕೊಂಡು ಪರಾರಿಯಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬೀದರ್ ಬಸ್ ಡಿಪೋ ನಂಬರ್ 2 ಕ್ಕೆ ಸೇರಿದ ಸರ್ಕಾರಿ ಬಸ್ KA38 F 971 ನಂಬರ್ ನ ಬಸ್ ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. ಬಸ್ ಕಳ್ಳತನ ಮಾಡಿದ ಖದೀಮರು ಮಿರಿಯಾಣ ಮಾರ್ಗವಾಗಿ ತಾಂಡುರ ಮೂಲಕ ತೆಲಂಗಾಣದ ಕಡೆ ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯವ್ಯಕ್ತವಾಗಿದೆ. ಬಸ್ ಹುಡುಕಾಟಕ್ಕಾಗಿ ಎರಡು ಪೊಲೀಸ್ ಟೀಮ್ ರಚನೆ ಮಾಡಲಾಗಿದೆ. ಚಿಂಚೋಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.