ವಿಜಯಪುರ: ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದರಿ ಸಾಲವಾಡಗಿ
ರಸ್ತೆಯಲ್ಲಿ ನಡೆದಿದೆ. ಬಸವನಬಾಗೇವಾಡಿ ತಾಲೂಕಿನ ಯಾಳವಾರ ಗ್ರಾಮದ ಬಸವರಾಜ ಕೋಟಿ (36) ಆತ್ಮಹತ್ಯೆಗೆ ಶರಣಾದರು. ಈ ಹಿಂದೆ ಕಾಳಸಂತಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದರು. ಆದ್ರೇ, ವ್ಯಾಪಾರದಲ್ಲಿ ನಷ್ಟ ಆಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವ್ಯಾಪಾರ ನಷ್ಟ – ಯುವಕ ನೇಣಿಕೆ ಶರಣು
![](https://karnataka1news.com/wp-content/uploads/2023/01/FB_IMG_1608181451658.jpg)