ವಿಜಯಪುರ: ವಿಧಾನಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯ ಮೇಲೆ ಹಲ್ಲೆಗೈದಿರುವ ಐವರು ವಿರುದ್ಧ ಕೇಸ್ ದಾಖಲಾಗಿದೆ.
ವಿಜಯಪುರದ ರತ್ನಾಪುರ ಕ್ರಾಸ್ನಲ್ಲಿ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ಮೇಲೆ ಹಲ್ಲೆ ನಡೆದಿತ್ತು. ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಅಲ್ತಾಫ್ ಕಾಖಂಡಕಿ, ರಮಲಿ ಚಂದ್, ಸಂತೋಷ ಪವಾರ್, ಸಾಹಿಲ್ ಬೇಪಾರಿ ಸೇರಿದಂತೆ 25-30 ಜನರ ವಿರುದ್ಧ ಕೇಸ್ ದಾಖಲಾಗಿದೆ. ಇನ್ನು ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾವಣೆ ಮಾಡುವಂತೆ ವಿಧಾನ ಪರಿಷತ್ ಸದಸ್ಯ ಪಾಟೀಲ ಸೇರಿದಂತೆ ಬೆಂಬಲಿಗರು ಬಿಜೆಪಿ ಹಿತೈಷಿಗಳು, ಕಾರ್ಯಕರ್ತರಿಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖನ ಮಾಡಿದ್ದಾರೆ. ಇದನ್ನು ಕೇಳಲು ಹೋದಾಗ ನನ್ಮೇಲೆ ಹಲ್ಲೆಗೈದು ಪರಾರಿಯಾಗಿದ್ದಾರೆ ಎಂದು ವಿಜುಗೌಡ ಪಾಟೀಲ ದೂರು ನೀಡಿದ್ದಾರೆ. ಈ ಕುರಿತು ತಿಕೋಟಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಅಭ್ಯರ್ಥಿ ಮೇಲೆ ಹಲ್ಲೆ, ಐವರ ವಿರುದ್ಧ ಕೇಸ್
![](https://karnataka1news.com/wp-content/uploads/2023/05/IMG-20230509-WA0009-1.jpg)