ವಿಜಯಪುರ: ಡಿಸಿಸಿ ಬ್ಯಾಂಕ್ ದೊಡ್ಡ ಪ್ರಮಾಣದಲ್ಲಿ ಸಾಧನೆ ಮಾಡಿದೆ ಎಂದು ಶಾಸಕ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ ಹೇಳಿದರು. ವಿಜಯಪುರದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹಿನ್ನಲೆ ಕಳೆದ ವರ್ಷ ಕಾರ್ಯಕ್ರಮ ಆಯೋಜನೆ ಮಾಡಲಾಗಿಲ್ಲ. ಸರ್ಕಾರ, ಹಾಗೂ ಬ್ಯಾಂಕಿನ ಅನುದಾನದಲ್ಲಿ ಬ್ಯಾಂಕ್ ಕಟ್ಟಡದ ಕಾಮಗಾರಿ ನಡೆಯುತ್ತಿದೆ. ಅಲ್ಲದೇ, ಜಿಲ್ಲೆಯಲ್ಲಿ ಬ್ಯಾಂಕ್ ಶಾಖೆಗಳನ್ನು ಹೆಚ್ಚಿಸಲು ತೀರ್ಮಾನ ಮಾಡಲಾಗಿದೆ. ಇನ್ನು ಜಿಲ್ಲಾದ್ಯಂತ. 9 ಶಾಖೆಗಳನ್ನು ಹೆಚ್ಚಿಸಲಾಗುವುದು. ಈಗಾಗಲೇ ಶಾಖೆಗಳಿಗೆ ಅನುಮತಿ ಸಿಕ್ಕಿದೆ ಎಂದರು.
ಅಲ್ಲದೇ, ರೈತರಿಗೆ 2.16 ಲಕ್ಷ ರೈತರಿಗೆ ಸಾಲ ನೀಡಲಾಗಿದೆ. ರೈತರಿಗೆ ಬಂಪರ್ ಆಫರ್ ನೀಡಲಾಗಿದೆ. ಅಲ್ಲದೇ, ನೀರಾವರಿ ರೈತರಿಗೆ 10 ಲಕ್ಷದ ವರೆಗೂ ಸಾಲ ನೀಡುವ ಉದ್ದೇಶ ಮಾಡಲಾಗಿದೆ. 2022-23ನೇ ಸಾಲಿನಲ್ಲಿ ಜಿಲ್ಲೆಯ 2.69 ಲಕ್ಷ ರೈತರಿಗೆ 1684 ಕೊಇಟಿ ಕೃಷಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, 19,500 ಹೊಸ ರೈತರಿಗೆ 113 ಕೋಟಿ ಸಾಲ ವಿತರಿಸಲು ಉದ್ದೇಶಿಸಿಲಾಗಿದೆ. ಇನ್ನು 2021-22ನೇ ಸಾಲಿನಲ್ಲಿ 12.95 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದರು…