ವಿಜಯಪುರ: ಸರ್ಕಾರಿ ಕಾಲೇಜುಗಳಲ್ಲಿ ಸಮರ್ಪಕ ಕೊಠಡಿಗಳ ನಿರ್ಮಾಣಕ್ಕೆ ಆಗ್ರಹಿಸಿ ವಿಜಯಪುರ ನಗರದ ಗಾಂಧಿಚೌಕ್ ಸರ್ಕಲ್ನಲ್ಲಿ ಎಬಿವಿಪಿ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿದರು. ಗಾಂಧಿಚೌಕ್ ಸರ್ಕಲ್ನಲ್ಲಿ ಎಬಿವಿಪಿನವರು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಅರ್ಧ ಗಂಟೆಗೂ ಹೆಚ್ಚಿನ ಸಮಯ ರಸ್ತೆ ತಡೆ ಹಿನ್ನೆಲೆ ಪೊಲೀಸರು ಹಾಗೂ ಎಬಿವಿಪಿ ಮಧ್ಯೆ ವಾಗ್ವಾದ ನಡೆದಿದೆ. ಇನ್ನೂ ಸಿಎಂ ಸಿದ್ದರಾಮಯ್ಯ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಕ್ರೋಶ ಹೊರಹಾಕಿದರು. ಬೇಕೆ ಬೇಕು ಕೊಠಡಿಗಳು ಬೇಕು ಎಂದು ಘೋಷಣೆ ಕೂಗಿದರು. ತಕ್ಷಣವೇ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.