ವಿಜಯಪುರ: ಅಕ್ರಮವಾಗಿ ಬೈಕ್ನಲ್ಲಿ ಗಾಂಜಾ ಸಾಗಾಟ ಮಾಡುವಾಗ ಅಬಕಾರಿ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹಡಲಸಂಗ ಗ್ರಾಮದಲ್ಲಿ ಗುರುವಾರ ನಡೆದಿದೆ. ಕಾಂತು ನಾಯಕ್, ಮಾರುತಿ ಪವಾರ್ ಬಂಧಿತ ಆರೋಪಿಗಳು. ಇನ್ನೂ ಬೈಕ್ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ವೇಳೆ ಪೊಲೀಸರು ದಾಳಿಗೈದು 3.5 ಕೆಜಿ ಗಾಂಜಾ, ಒಂದು ಬೈಕ್ ಜಪ್ತಿಗೈದಿದ್ದಾರೆ. ಒಟ್ಟು 1.50 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಇಂಡಿ ವಲಯ ಅಬಕಾರಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.