ವಿಜಯಪುರ: ಕಾಂಗ್ರೆಸ್ ಗ್ಯಾರಂಟಿ 420 ಗ್ಯಾರಂಟಿ ಕಾರ್ಡ್ ಆಗಿದೆ ಎಂದು ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿದರು. ವಿಜಯಪುರ ನಗರದಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಜನತೆ ತಿರಸ್ಕಾರ ಮಾಡಿದೆ. ಕಾಂಗ್ರೆಸ್ ಮುಳುಗುವ ಹಡಗು ಆಗಿದೆ ಎಂದು ವಾಗ್ದಾಳಿ ಮಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಜನತೆ ತಕ್ಕಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು. ಈ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಬರುತ್ತದೆ. ರಾಜ್ಯದಲ್ಲಿ 150 ಸೀಟ್ಗಳನ್ನು ಬಿಜೆಪಿ ಗೆಲುವು ಸಾಧಿಸಿ, ಬಹುಮತದಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದರು. ಈಗಾಗಲೇ ಬಿಜೆಪಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಅಭಿವೃದ್ಧಿ ಕೆಲಸಗಳು ಆಗಿದ್ದಾವೆ. ಡಬಲ್ ಎಂಜಿನ ಸರ್ಕಾರದಿಂದ ಅಭಿವೃದ್ಧಿ ಆಗಿದೆ. ಪ್ರಣಾಳಿಕೆಯಲ್ಲಿ ಯುವಕರು, ಮಹಿಳೆಯರಿಗೆ, ರೈತರಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಹಬ್ಬಕ್ಕೆ ಮೂರು ಸಿಲಿಂಡರ್ ನೀಡಲಾಗುತ್ತದೆ ಎಂದರು.