ವಿಜಯಪುರ: ನಾಯಕರ ಪಕ್ಕದಲ್ಲಿ ನಿಲ್ಲುವ ಸಲುವಾಗಿ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ವಿದ್ಯಾರಾಣಿ ತುಂಗಳ ಹಾಗೂ ಮಹಾನಗರ ಪಾಲಿಕೆ ನೂತನ ಸದಸ್ಯೆ ಆರತಿ ಶಹಾಪುರ ಮಧ್ಯೆ ಮಾತಿನ ಚಕಮಕಿ ಆಗಿದೆ. ವಿಜಯಪುರ ನಗರದ ಟೇಕಡೆ ಗಲ್ಲಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ 200 ಯುನಿಟ್ ವಿದ್ಯುತ್ ಹಾಗೂ ಮಹಿಳೆಯರಿಗೆ 2 ಸಾವಿರ ನಗದು ಸೇರಿದಂತೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಪ್ರಚಾರ ಕಾರ್ಯಕ್ರಮದಲ್ಲಿ ಈ ಇಬ್ಬರ ಮಧ್ಯೆ ಮಾತಿನ ಚಕಮಕಿ ಆಗಿದೆ. ಅಲ್ಲದೇ, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮ್ಮಿದ್ ಮುಶ್ರಿಫ್ ಗಲಾಟೆಯನ್ನು ತಿಳಿಗೊಳಿಸಿದರು. ಇನ್ನೂ ಈ ಗಲಾಟೆ ಮುಂದುವರೆಯುತ್ತಾ ಅಥವಾ ಇಲ್ಲಿಗೆ ಅಂತ್ಯ ಆಗುತ್ತಾ ಎಂದು ಕಾಯ್ದು ನೋಡಬೇಕಿದೆ.