ವಿಜಯಪುರ: ಯಾವುದೇ ಕೆಲಸಕ್ಕಾಗಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್(Pistol) ಇಟ್ಟುಕೊಂಡು ಹೋಗುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು ಕಂಟ್ರಿ ಪಿಸ್ತೂಲ್, ಜೀವಂತ ಗುಂಡು ಜಪ್ತಿಗೈದಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ರೈಲ್ವೆ(Railway Station) ನಿಲ್ದಾಣ ಬಳಿ ಘಟನೆ ಸಂಭವಿಸಿದೆ. ಲಚ್ಯಾಣ ಗ್ರಾಮದ ಅನಿಲ ಮಲ್ಲಪ್ಪ ಬಂಡಾರಿ ಬಂಧಿತ ಆರೋಪಿ. ಇನ್ನು ಇಂಡಿ ಪಟ್ಟಣದ ರೈಲ್ವೆ ನಿಲ್ದಾಣದಿಂದ ಅಹಿರಸಂಗ ಕಡೆಗೆ ಹೋಗುತ್ತಿದ್ದ ವೇಳೆ ಖಚಿತ ಮಾಹಿತಿ ಆಧರಿಸಿ ಪಿಎಸ್ಐ ಸೋಮೇಶ ಗೆಜ್ಜಿ ನೇತೃತ್ವದಲ್ಲಿ ದಾಳಿಗೈದು ಒಂದು ಕಂಟ್ರಿ ಪಿಸ್ತೂಲ್, ಎರಡು ಜೀವಂತ ಗುಂಡು(Bullet) ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ, ಆರೋಪಿ ವಿರುದ್ಧ ಇಂಡಿ ಗ್ರಾಮೀಣ ಪೊಲೀಸ(Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
![](https://karnataka1news.com/wp-content/uploads/2023/08/IMG-20230816-WA0079-1024x768.jpg)