ವಿಜಯಪುರ: ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿಯಾಗಿರುವ ಪರಿಣಾಮ ಓರ್ವ ಸ್ಥಳದಲ್ಲಿಯೇ ಅಸುನೀಗಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದಲ್ಲಿ ನಡೆದಿದೆ. ಅರ್ಜುನ ಅಸುನೀಗಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಇನ್ನು ಕಂಬಾಗಿಯಿಂದ ಬಬಲೇಶ್ವರ ಹೋಗುವ ವೇಳೆಯಲ್ಲಿ ಟ್ರ್ಯಾಕ್ಟರ್ ಟೇಲರ್ಗೆ ಬೈಕ್ ಡಿಕ್ಕಿಯಾಗಿರುವ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಬಬಲೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
———–
ವಿಜಯಪುರದ ಪಿಡಿಜೆ ಸ್ಕೂಲ್ ಹತ್ತಿರ ಅಕ್ರಮವಾಗಿ ಓಸಿ ಮಟಕಾ ಬರೆದುಕೊಳ್ಳುತ್ತಿದ್ದ ಇಬ್ಬರ ವಿರುದ್ಧ ದೂರು ದಾಖಲಾಗಿದೆ. ಮೋಸಿನ್ ಅಬ್ಬಾಸ್ಅಲಿ ಬಳಗಾನೂರ ಹಾಗೂ ಇಮ್ರಾನ್ ಅಬ್ದುಲ್ ತಾಳಿಕೋಟೆ ವಿರುದ್ಧ ದೂರು ದಾಖಲಾಗಿದ್ದು, ಈ ಇಬ್ಬರು ಅಕ್ರಮವಾಗಿ ಸಾರ್ವಜನಿಕರ ಸ್ಥಳದಲ್ಲಿಯೇ ಓಸಿ ಚೀಟಿಗಳನ್ನು ಬರೆದುಕೊಳ್ಳುವ ವೇಳೆಯಲ್ಲಿ ಪೊಲೀಸರು ದಾಳಿಗೈದು ಓಸಿ ಚೀಟಿಯನ್ನು ಜಪ್ತಿಗೈದಿದ್ದಾರೆ. ಈ ಕುರಿತು ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
————–
ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ನೀಡಿರುವ ಹಿನ್ನಲೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಪಟ್ಟಣದ ದೂಡಿಹಾಳ ರಸ್ತೆಯಲ್ಲಿ ನಡೆದಿದೆ. ಬಾಬು ರಾಠೋಡ ವಿರುದ್ಧ ಕೇಸ್ ದಾಖಲಾಗಿದ್ದು, ಇನ್ನು ಆರೋಪಿ ತನ್ನ ಡಾಬಾದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ನೀಡಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿಗೈದು ಮದ್ಯ, ಪ್ಲಾಸ್ಟಿಕ್ ಗ್ಲಾಸ್ ಜಪ್ತಿಗೈದಿದ್ದಾರೆ. ಈ ಕುರಿತು ಬಬಲೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
————-
ಅಕ್ರಮವಾಗಿ ಅಂದರ್ ಬಾಹರ್ ಆಟವಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರದ ಸಿಕ್ಯಾಬ್ ಸ್ಕೂಲ್ ಹತ್ತಿರ ನಡೆದಿದೆ. ಶಕೀಲ್, ಅಯ್ಯುಬ್, ಸಿದ್ದು, ಸಮೀರ್, ರಹೀಂ, ಸಮೀರ್, ಹುಸೇನ್, ತೌಶೀಫ್, ಇರ್ಫಾನ್ ಇಸ್ಪೀಟ್ ಆರೋಪಿಗಳು. ಇನ್ನು ಸಾರ್ವಜನಿಕ ಸ್ಥಳದಲ್ಲಿಯೇ ಅಕ್ರಮವಾಗಿ ಇಸ್ಪೀಟ್ ಆಡುವಾಗ್ ದಾಳಿಗೈದು ಕೆಪಿ ಆ್ಯಕ್ಟ್ ಅಡಿಯಲ್ಲಿ ದೂರು ದಾಖಲು ಮಾಡಿದ್ದಾರೆ. ಈ ಕುರಿತು ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.