ವಿಜಯಪುರ: ನಡೆದಾಡುವ ದೇವರು ಸಿದ್ಧೇಶ್ವರ ಶ್ರೀಗಳ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ. ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಮಂಗಳವಾರ ಮಧ್ಯಾಹ್ನ 3ರ ವರೆಗೂ ಭಕ್ತರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ, ಸೈನಿಕ ಶಾಲೆಗೆ ಭಕ್ತ ಸಮೂಹವೆ ಹರಿದು ಬರುತ್ತಿದೆ. ಅಂತಿಮ ದರ್ಶನದ ಬಳಿಕ ನಗರದ ಜ್ಞಾನಯೋಗಾಶ್ರಮದಲ್ಲಿ ಸಂಜೆ 5ಕ್ಕೆ ಸಕಲ ವಿಧಿವಿಧಾನಗಳ ಮೂಲಕ ಅಂತ್ಯಕ್ರಿಯೆ ನಡೆಯಲಿದೆ.