ವಿಜಯಪುರ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮ ಇವರ ಸಹಯೋಗದಲ್ಲಿ ಬರುವ ಜನವರಿ 7 ರಂದು ಸಂಜೆ 6-30ಕ್ಕೆ ನಗರದ ಆನಂದ ಮಹಲ್ ಸ್ಮಾರಕದ ಆವರಣದಲ್ಲಿ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಸಾಂಸ್ಕೃತಿಕ ಕಾರ್ಯಕ್ರಮದಲಿ ವಿಜಯಪುರದ ಶ್ರೀಶೈಲ ಬಳಗಾನೂರ ಇವರಿಂದ ಕಣಿ ವಾದನ, ಕುಮಾರಿ ಸೂಫಿಯಾ ಬಿಜಾಪುರ ಇವರಿಂದ ಕನ್ನಡ ಗೀತೆಗಳ ಗಾಯನ, ಕುಷ್ಟಗಿಯ ಜೀವನಸಾಬ್ ವಾಲಿಕಾರ ಇವರಿಂದ ಜಾನಪದ ಗೀತೆಗಳ ಗಾಯನ ಹಾಗೂ ಸ್ವಯಂಭೋ ಆರ್ಟ್ ಫೌಂಡೇಶನ್, ವಿಜಯಪುರ ವತಿಯಿಂದ ಸಮೂಹ ನೃತ್ಯ ಕಾರ್ಯಕ್ರಮಗಳು ಅಂದು ರಾತ್ರಿ 9 ಗಂಟೆವರೆಗೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.