ವಿಜಯಪುರ: ಏಳು ಕಾರ್ಮಿಕರ(Labour) ಸಾವು(Death) ಹಿನ್ನೆಲೆ ಮೃತಪಟ್ಟಿರುವ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು ಎಂದು ವಿಜಯಪುರ ನಗರದ ಜಿಲ್ಲಾಧಿಕಾರಿ ಕಚೇರಿಯ ಎದುರು ಆಲ್ ಇಂಡಿಯಾ ಟ್ರೆಡ್ ಯುನೈಟೈಡ್ ಯುನಿಯನ್ ಸೆಂಟರ್ನವರು ಪ್ರತಿಭಟನೆ ನಡೆಸಿದರು. ವಿಜಯಪುರದ ರಾಜಗುರು ಫುಡ್ಸ್(Foods) ಘಟಕದಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದಾರೆ. ಇದರಿಂದ ಕುಟುಂಬಸ್ಥರಿಗೆ ತುಂಬಲಾರದ ನೋವು ಆಗಿದೆ. ಅದಕ್ಕಾಗಿ ಮೃತಪಟ್ಟಿರುವ ಕಾರ್ಮಿಕರ ಕುಟುಂಬಕ್ಕೆ ಕಾರ್ಮಿಕರ ಕಾಯ್ದೆ, ಮಾನವೀಯತೆಯ ದೃಷ್ಟಿಯಿಂದ ಹೆಚ್ಚಿನ ಪರಿಹಾರ ನೀಡಬೇಕು. ಅಲ್ಲದೇ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಜೊತೆಗೆ ಪರಿಹಾರನೂ ನೀಡಬೇಕು ಎಂದು ಒತ್ತಾಯಿಸಿದರು. ಅಲ್ಲದೇ, ಘಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಸಂಬಳ ನೀಡಬೇಕು. ಈ ಘಟನೆಗೆ ಕಾರಣ ಆದವರ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.