ವಿಜಯಪುರ: ಮಕ್ಕಳ ಕಳ್ಳರ ವಂದತಿ ಹಿನ್ನಲೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ ವಿಜಯಪುರ ನಗರದ ಸೆಟ್ಲೈಟ್ ಬಳಿ ನಡೆದಿದೆ.
ದೆಹಲಿ ಮೂಲದ ನಾಲ್ವರು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ನಾಲ್ವರು ಹೂವು ಮಾರಾಟಗಾರರು. ಇನ್ನು ಸೆಟ್ಲೈಟ್ ಬಸ್ ನಿಲ್ದಾಣದಲ್ಲಿ ಮಕ್ಕಳು ಕಳ್ಳತನಕ್ಕೆ ಬಂದಿದ್ದಾರೆ ಎಂದು ಆರೋಪಿಸಿ ಸ್ಥಳೀಯರೇ ಹಿಡಿದುಕೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅದಕ್ಕಾಗಿ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಮಾಡುತ್ತಿದ್ದಾರೆ. ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.