ವಿಜಯಪುರ: ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಎಫ್ಡಿಎ ಎಸಿಬಿ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಗ್ರಾಮೀಣ ಬಿಇಓ ಕಚೇರಿಯಲ್ಲಿ ನಡೆದಿದೆ.
ಶಿಕ್ಷಕರ ವರ್ಗಾಣೆ ಆರ್ಡರ್ ಕಾಪಿ ಕೊಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ಎಫ್ ಡಿ ಎ ವಿನೋದ ರಾಠೋಡ ಎಸಿಬಿ ಬಲೆಗೆ ಬಿದ್ದಿದ್ದಾನೆ. ಶಿಕ್ಷಕರ ವರ್ಗಾವಣೆ ಆಗಿರುವ ಆದೇಶ ಪ್ರತಿ ಕೊಡಲು ಐದು ಸಾವಿರ ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿಗೈದು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಆರೋಪಿಯನ್ನು ಎಸಿಬಿ ಅಧಿಕಾರಿಗಳು ವಿಚಾರಣೆ ಮಾಡುತ್ತಿದ್ದಾರೆ. ವಿಜಯಪುರ ಎಸಿಬಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.