ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ ಚೆಕ್ಪೋಸ್ಟ್ನಲ್ಲಿ ಲಕ್ಷಾಂತರ ನಗದು ಜಪ್ತಿಗೈದಿದ್ದಾರೆ ಎಂದು ವಿಜಯಪುರ ಲೋಕಾಯುಕ್ತ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ತಿಳಿಸಿದ್ದಾರೆ.
ಇನ್ನು ಧೂಳಖೇಡ ಚೆಕ್ಪೋಸ್ಟ್ನಲ್ಲಿ ಲೋಕಾಯುಕ್ತ ಎಸ್ಪಿ ಅನಿತಾ ಹದ್ದಣ್ಣನವರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಅಲ್ಲದೇ, ದಾಳಿ ವೇಳೆಯಲ್ಲಿ 4,53,611 ನಗದು ಜಪ್ತಿಗೈದಿದ್ದಾರೆ. ಇನ್ನು ನಗದು ಜಪ್ತಿಗೈದು ಮುಂದಿನ ಕಾನೂನು ಕ್ರಮಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.