ವಿಜಯಪುರ: ದೇವರಹಿಪ್ಪರಗಿ ಮತಕ್ಷೇತ್ರದ ಒಂಬತ್ತು ಆಕಾಂಕ್ಷಿಗಳು ಕ್ಷೇತ್ರದಲ್ಲಿ ಸಾಕಷ್ಟು ಸಂಘಟನೆ ಮಾಡಿದ್ದೇವೆ. ಅದಕ್ಕಾಗಿ ಯಾರಿಗೆ ಟಿಕೆಟ್ ಸಿಕ್ಕರೂ ಒಮ್ಮತದಿಂದ ಚುನಾವಣೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿತ್ತು. ಇದೀಗ ಹೊಸ ಹೆಸರು ಕೇಳಿ ಬರುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಆನಂದ ದೊಡಮನಿ ಹೇಳಿದರು.
ವಿಜಯಪುರ ನಗರದಲ್ಲಿ ಶುಕ್ರವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಎಸ್.ಆರ್. ಪಾಟೀಲ ಹೆಸರು ಕೇಳಿ ಬರುತ್ತಿದೆ. ಇದಕ್ಕೆ ನಮ್ಮ ಸಮ್ಮತಿಯಿಲ್ಲ. 71 ವಯಸ್ಸಾಗಿದೆ. ಬೀಳಗಿ ಪಟ್ಟಣದವರು. ಅಲ್ಲಿಂದ ಬಂದು ಹೋಗುವುದು ಕಷ್ಟವಾಗಲಿದೆ. ಹೀಗಾಗಿ ಟಿಕೆಟ್ ನೀಡಬಾರದು ಎಂದರು. ನಾವು ಒಂಬತ್ತು ಜನ ಆಕಾಂಕ್ಷಿಗಳು ಒಗ್ಗಟ್ಟಿನಿಂದ ಚುನಾವಣೆ ನಡೆಸಲು ಬದ್ಧರಾಗಿದ್ದೇವೆ. ಪ್ರಜಾಧ್ವನಿ ಯಾತ್ರೆಯಲ್ಲೂ ಪ್ರಮಾಣ ಮಾಡಿಸಿ, ಸಮೀಕ್ಷೆ ಪ್ರಕಾರ ಈ ಒಂಬತ್ತು ಜನರಲ್ಲಿಯೇ ಟಿಕೆಟ್ ನೀಡುವ ಭರವಸೆ ನೀಡಿದ್ದರು. ಇದೀಗ ಎಸ್.ಆರ್. ಪಾಟೀಲ ಹೆಸರು ಕೇಳಿ ಬರುತ್ತಿದೆ. ಇದಕ್ಕೆ ಆಕ್ಷೇಪವಿದ್ದು, ನಮ್ಮಲ್ಲಿಯೇ ಒಬ್ಬರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದರು. ನಾವು ನಿರಂತರವಾಗಿ ಜನರೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದರು.
ಕಾಂಗ್ರೆಸ್ನಲ್ಲಿ ಭುಗಿಲೆದ್ದ ಅಸಮಾಧಾನ ಸ್ಫೋಟ
![](https://karnataka1news.com/wp-content/uploads/2023/03/1218677_Wallpaper2_1657692464009_1657692464009-1.jpg)