ವಿಜಯಪುರ: ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ನೀಡಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಗುತ್ತರಗಿ ಗ್ರಾಮದಲ್ಲಿ ನಡೆದಿದೆ. ಅನಿಲ್ ರಾಯಪ್ಪ ಮಾದರ ವಿರುದ್ಧ ದೂರು ದಾಖಲಾಗಿದ್ದು, ಗುತ್ತರಗಿ ಗ್ರಾಮದಲ್ಲಿರುವ ಕಿರಾಣಿ ಅಂಗಡಿಯ ಎದುರು ಮದ್ಯ ಸೇವನೆಗೆ ಅವಕಾಶ ನೀಡಿರುವ ಹಿನ್ನಲೆ ಪೊಲೀಸರು ದಾಳಿಗೈದಿದ್ದಾರೆ. ಈ ಕುರಿತು ಸಿಂದಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮವಾಗಿ ಓಸಿ ಮಟಕಾ ಬರೆದುಕೊಳ್ಳುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿಗೈದು ಓರ್ವನ ವಿರುದ್ಧ ದೂರು ದಾಖಲು ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬೈಲಕೂರ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಣ ಬೈಲಪ್ಪ ಸೋಬಾನ್ ವಿರುದ್ಧ ದೂರು ದಾಖಲಾಗಿದ್ದು, ಇನ್ನು ಆರೋಪಿ ಸಾರ್ವಜನಿಕರ ಸ್ಥಳದಲ್ಲಿಯೇ ಓಸಿ ಚೀಟಿಗಳನ್ನು ಬರೆದುಕೊಳ್ಳುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿ ಮಾಡಿದ್ದಾರೆ. ಈ ಕುರಿತು ಮುದ್ದೇಬಿಹಾಳ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓಸಿ ಮಟಕಾ ಬರೆದುಕೊಳ್ಳುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿಗೈದು ಓರ್ವನ ವಿರುದ್ಧ ದೂರು ದಾಖಲು ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಎಪಿಎಂಸಿ ಯಾರ್ಡ್ ಬಳಿ ನಡೆದಿದೆ. ಅನಿಲ ದೇವಪ್ಪ ಗಂಗಣಿ ವಿರುದ್ಧ ದೂರು ದಾಖಲಾಗಿದ್ದು, ಇನ್ನು ಆರೋಪಿ ಸಾರ್ವಜನಿಕರ ಸ್ಥಳದಲ್ಲಿಯೇ ಓಸಿ ಚೀಟಿಗಳನ್ನು ಬರೆದುಕೊಳ್ಳುತ್ತಿದ್ದ ವೇಳೆಯಲ್ಲಿ ಪೊಲೀಸರು ದಾಳಿಗೈದು 2 ಸಾವಿರ ನಗದು ಜಪ್ತಿಗೈದಿದ್ದಾರೆ. ಈ ಕುರಿತು ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.