ವಿಜಯಪುರ: ಮಧ್ಯಪ್ರದೇಶದಿಂದ ವಿಜಯಪುರಕ್ಕೆ ಅಕ್ರಮವಾಗಿ ಪಿಸ್ತೂಲ್, ಗುಂಡುಗಳನ್ನು ಮಾರಾಟಕ್ಕೆ ತಂದಿದ್ದ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ ಎಂದು ಎಸ್ಪಿ ಎಚ್ಡಿ ಆನಂದಕುಮಾರ ಮಾಹಿತಿ ನೀಡಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಅಕ್ರಮ ಪಿಸ್ತೂಲ್, ಗುಂಡುಗಳನ್ನು ಇಟ್ಟುಕೊಂಡಿದ್ದ ಕಿರಣ ರಮೇಶ ರೂಗಿ, ಕಿರಣ ದಾನಪ್ಪ ಗಾಯಕವಾಡನ್ನು ಬಂಧಿಸಲಾಗಿದೆ. ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿ ಅನುಮಾಸ್ಪದ ರೀತಿಯಲ್ಲಿ ಕಿರಣ ರೂಗಿ ಓಡಾಟ ಮಾಡುತ್ತಿದ್ದ. ಈ ವೇಳೆಯಲ್ಲಿ ಗಾಂಧಿಚೌಕ್ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿಗೈದು ಪರಿಶೀಲನೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಧ್ಯಪ್ರದೇಶದಿಂದ 3 ಪಿಸ್ತೂಲ್, 4 ಜೀವಂತ ಗುಂಡುಗಳನ್ನು ಮಾರಾಟಕ್ಕೆ ತಂದಿದ್ದನ್ನು ಆರೋಪಿಗಳು ಒಪ್ಪಿಕೊಂಡಿದ್ದಾರೆ.
ಅಲ್ಲದೇ, ಮತ್ತೊಂದೆಡೆ ಒಂದು ಕಂಟ್ರಿ ಪಿಸ್ತೂಲ್, ಒಂದು ಜೀವಂತ ಗುಂಡು ಸೇರಿದಂತೆ ಇಬ್ಬರು ಲಾಕ್ ಮಾಡಲಾಗಿದೆ. ಸುರೇಶ ಲಕ್ಷ್ಮಣ ರಾಠೋಡ, ವಿಜಯ@ ಪಿಂಟೂ ಲಕ್ಷ್ಮಣ ರಾಠೋಡ ಬಂಧಿಸಲಾಗಿದೆ. ಈ ಇಬ್ಬರು ಆರೋಪಿಗಳಿಂದ ಒಂದು ಪಿಸ್ತೂಲ್, ಒಂದು ಜೀವಂತ ಗುಂಡು, ಒಂದು ಕಾರು, ಒಂದು ಲಾಂಗ್ ವಶಕ್ಕೆ ಪಡೆಯಲಾಗಿದೆ. ಅಲ್ಲದೇ, ಗಾಂಧಿಚೌಕ್, ಆದರ್ಶನಗರ ಪೊಲೀಸರ ಕಾರ್ಯಕ್ಕೆ ಎಸ್ಪಿ ಆನಂದಕುಮಾರ ಸಂತಸ ವ್ಯಕ್ತಪಡಿಸಿದ್ದಾರೆ.